ಅವನು ನಿಜಕ್ಕೂ... ಕವಿಯೆ...
ಅವಳಂದಕೆ ಸೋತ ಪದಗಳ
ಸೂಸಿ... ಸಾವೆ....ಇರದ ಕವಿತೆಗಳ
ಕಟ್ಟಿ.. ಕಲ್ಲೆದೆಗಳಲ್ಲೂ ಹೂವರಳಿಸುವ
ಅವನ ವಾಚನ, ಅವಳ ಕಿವಿಗೂ
ಬಿದ್ದಿತ್ತು, ಮಾರ್ಜಾಲ ಜಗತ್ತಿಗಂಜಿ
ಅವಳು ನಗಲಿಲ್ಲ...
ಇಲ್ಲಿ ಕವಿ ಸೋತಿಲ್ಲ...
ಅವನು ನಿಜಕ್ಕೂ... ಕವಿಯೆ....
ರಾಮನಿಗೆ ದಕ್ಕದ ಮಾಯಾ ಜಿಂಕೆಯ
ಹಾಗೆ, ಮಿಂಚಿ ಮಾಯವಾದಳ
ಚಿತ್ತಾರವನ್ನು ನೆತ್ತರಿನಲ್ಲೆ ಚಿತ್ರಿಸಿಟ್ಟ
ಕಾಮದ ಲೋಕ ಬೆಂಕಿಯಿಟ್ಟಿತು...!!
ಬಂಡೆಗಲ್ಲುಗಳ ಮೇಲೆ ಕೆತ್ತಿದ
ಹೆಸರಿನ ಮೇಲೆ; ಬೀಡಾ ಉಗುಳಿ
ಅದನ್ನು ಅತ್ಯಾಚಾರಗೊಳಿಸಲಾಯಿತು..
ಇಲ್ಲಿ ಕವಿ ಸೋತಿಲ್ಲ....
ಅವನು ನಿಜಕ್ಕೂ... ಕವಿಯೆ....
ಅವನೆಂದು ಕನಸಿನರಮನೆಯ ಕಟ್ಟಲಿಲ್ಲ..
ವಾಸ್ತವದ ಗುಡಿಸಲಿನಲ್ಲಿಯೆ
ಬದುಕನ್ನು ಕಟ್ಟಿಕೊಳ್ಳಲೆತ್ನಿಸಿದ,
ಅಂತಸ್ತಿನ ಸಣ್ಣ ಕಿಡಿಯೊಂದು ಸೋಕಿ
ಅದು ಸುಟ್ಟು ಬೂದಿಯಾಗಿ ಹೋಯಿತು...
ಇಲ್ಲಿ ಕವಿ ಸೋತಿಲ್ಲ...
ಅವನು ನಿಜಕ್ಕೂ... ಕವಿಯೆ...
ಉಸಿರುಸಿರಿನಲ್ಲೂ ಅವಳೆ
ಬೇರೆತು ಹೋಗಿರುವಾಗ...ಮರೆತು ಬಿಡುವ
ಪ್ರಮೇಯವೆಲ್ಲಿ ಬಂತು...!!
ಇವನ ಉಸಿರು ನಿಲ್ಲದ ತನಕ
ಅವಳ ಹೆಸರಿಗೆ ಸಾವಿಲ್ಲ...
ಅವಳ ಸಾವಿನ ನಂತರ ಇವನ
ಉಸಿರಿಗೆ ಅರ್ಥವಿಲ್ಲ...
ಇಲ್ಲಿ ಕವಿ ಸೋತಿಲ್ಲ...
ಅವನು ನಿಜಕ್ಕೂ... ಕವಿಯೆ...
ಯಾವ ಪದವ ಕಟ್ಟಿದರೇನು
ಅವಳದೆ ಭಾವ....
ಯಾವ ವಾದ್ಯವ ನುಡಿಸಿದರೇನು
ಅವಳದೆ ರಾಗ.....
ಜಗತ್ತಿಗೇನು..? ತನ್ನಿಚ್ಚೆಯಂತೆ
ನಡೆಯದೆ ಹೋದರೆ ಹುಚ್ಚ, ತೆವಲುಗಾರ
ನೆನ್ನುತ್ತದೆ..
ಅದೆಂದು ಒಳಗಣ್ಣಿನಿಂದ ನೋಡುವುದೆ
ಇಲ್ಲ..!! ಎಲ್ಲ ವ್ಯಾಪಾರಿಕರಣ...
ಎಲ್ಲ ವ್ಯಾಪಾರಿಕರಣ... ಹೀಗಾಗಿ
ಇಲ್ಲಿ ಕವಿ ಸೋತಿಲ್ಲ... ಸೋಲುವುದು ಇಲ್ಲ...
ಅವಳಂದಕೆ ಸೋತ ಪದಗಳ
ಸೂಸಿ... ಸಾವೆ....ಇರದ ಕವಿತೆಗಳ
ಕಟ್ಟಿ.. ಕಲ್ಲೆದೆಗಳಲ್ಲೂ ಹೂವರಳಿಸುವ
ಅವನ ವಾಚನ, ಅವಳ ಕಿವಿಗೂ
ಬಿದ್ದಿತ್ತು, ಮಾರ್ಜಾಲ ಜಗತ್ತಿಗಂಜಿ
ಅವಳು ನಗಲಿಲ್ಲ...
ಇಲ್ಲಿ ಕವಿ ಸೋತಿಲ್ಲ...
ಅವನು ನಿಜಕ್ಕೂ... ಕವಿಯೆ....
ರಾಮನಿಗೆ ದಕ್ಕದ ಮಾಯಾ ಜಿಂಕೆಯ
ಹಾಗೆ, ಮಿಂಚಿ ಮಾಯವಾದಳ
ಚಿತ್ತಾರವನ್ನು ನೆತ್ತರಿನಲ್ಲೆ ಚಿತ್ರಿಸಿಟ್ಟ
ಕಾಮದ ಲೋಕ ಬೆಂಕಿಯಿಟ್ಟಿತು...!!
ಬಂಡೆಗಲ್ಲುಗಳ ಮೇಲೆ ಕೆತ್ತಿದ
ಹೆಸರಿನ ಮೇಲೆ; ಬೀಡಾ ಉಗುಳಿ
ಅದನ್ನು ಅತ್ಯಾಚಾರಗೊಳಿಸಲಾಯಿತು..
ಇಲ್ಲಿ ಕವಿ ಸೋತಿಲ್ಲ....
ಅವನು ನಿಜಕ್ಕೂ... ಕವಿಯೆ....
ಅವನೆಂದು ಕನಸಿನರಮನೆಯ ಕಟ್ಟಲಿಲ್ಲ..
ವಾಸ್ತವದ ಗುಡಿಸಲಿನಲ್ಲಿಯೆ
ಬದುಕನ್ನು ಕಟ್ಟಿಕೊಳ್ಳಲೆತ್ನಿಸಿದ,
ಅಂತಸ್ತಿನ ಸಣ್ಣ ಕಿಡಿಯೊಂದು ಸೋಕಿ
ಅದು ಸುಟ್ಟು ಬೂದಿಯಾಗಿ ಹೋಯಿತು...
ಇಲ್ಲಿ ಕವಿ ಸೋತಿಲ್ಲ...
ಅವನು ನಿಜಕ್ಕೂ... ಕವಿಯೆ...
ಉಸಿರುಸಿರಿನಲ್ಲೂ ಅವಳೆ
ಬೇರೆತು ಹೋಗಿರುವಾಗ...ಮರೆತು ಬಿಡುವ
ಪ್ರಮೇಯವೆಲ್ಲಿ ಬಂತು...!!
ಇವನ ಉಸಿರು ನಿಲ್ಲದ ತನಕ
ಅವಳ ಹೆಸರಿಗೆ ಸಾವಿಲ್ಲ...
ಅವಳ ಸಾವಿನ ನಂತರ ಇವನ
ಉಸಿರಿಗೆ ಅರ್ಥವಿಲ್ಲ...
ಇಲ್ಲಿ ಕವಿ ಸೋತಿಲ್ಲ...
ಅವನು ನಿಜಕ್ಕೂ... ಕವಿಯೆ...
ಯಾವ ಪದವ ಕಟ್ಟಿದರೇನು
ಅವಳದೆ ಭಾವ....
ಯಾವ ವಾದ್ಯವ ನುಡಿಸಿದರೇನು
ಅವಳದೆ ರಾಗ.....
ಜಗತ್ತಿಗೇನು..? ತನ್ನಿಚ್ಚೆಯಂತೆ
ನಡೆಯದೆ ಹೋದರೆ ಹುಚ್ಚ, ತೆವಲುಗಾರ
ನೆನ್ನುತ್ತದೆ..
ಅದೆಂದು ಒಳಗಣ್ಣಿನಿಂದ ನೋಡುವುದೆ
ಇಲ್ಲ..!! ಎಲ್ಲ ವ್ಯಾಪಾರಿಕರಣ...
ಎಲ್ಲ ವ್ಯಾಪಾರಿಕರಣ... ಹೀಗಾಗಿ
ಇಲ್ಲಿ ಕವಿ ಸೋತಿಲ್ಲ... ಸೋಲುವುದು ಇಲ್ಲ...